ಮೈಸೂರು: 'ಗ್ರಂಥಾಲಯದ ಸಿಬ್ಬಂದಿ ವೇತನ ತಾರತಮ್ಯ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು' ಸಾರ್ವಜನಿಕ ಗ್ರಂಥಾಲಯ, ಸಣ್ಣ ಉಳಿತಾಯ ಹಾಗೂ ಲಾಟರಿ ಸಚಿವ ರೇವೂನಾಯಕ ಬೆಳಮಗಿ ಭಾನುವಾರ ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಂಥಾಲಯ ಸಿಬ್ಬಂದಿಯನ್ನು ಪುರಸ್ಕರಿಸಿ ಅವರು ಮಾತನಾಡಿದರು.
'ಗ್ರಾಮೀಣ ಪ್ರದೇಶಗಳ ಗ್ರಂಥಾಲಯಗಳಲ್ಲಿ ಕೆಲಸ ಮಾಡುವ ಮೇಲ್ವಿಚಾರಕರಿಗೆ ಬೆಂಗಳೂರಿನಲ್ಲಿ 2,500 ರೂಪಾಯಿ ವೇತನ ನೀಡುತ್ತಿದ್ದು, ಮೈಸೂರಿನಲ್ಲಿ 1,500 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದು ಕೆಲವರು ಮನವಿ ಸಲ್ಲಿಸಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಸಿಬ್ಬಂದಿ ವೇತನ ತಾರ ತಮ್ಯ ನಿವಾರಣೆ ಮಾಡಲಾಗುವುದು' ಎಂದರು.
No comments:
Post a Comment